ತನ್ವೀರ್ ಮೇಲೆ ಹಲ್ಲೆ ಪ್ರಕರಣ: ಸಂಘಟನೆಯೊಂದರ ನಂಟಿನ ಶಂಕೆ

335

ಮೈಸೂರು: ಮಾಜಿ ಸಚಿವ ಹಾಗೂ ಶಾಸಕ ತನ್ವೀರ್ ಸೇಠ್ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಐವರನ್ನ ವಶಕ್ಕೆ ಪಡೆಯಲಾಗಿದೆ. ತನ್ವೀರ್ ಸೇಠ್ ಹತ್ಯೆ ಮಾಡಲೆಂದೇ ಅವರ ಮೇಲೆ ಹಲ್ಲೆ ಮಾಡಿದ್ದೆ ಎಂದು ಆರೋಪಿ ಫರ್ಹಾನ ಹೇಳಿದ್ದಾನೆ.

ಈ ಪ್ರಕರಣದ ಹಿಂದೆ ಸಂಘಟನೆಯೊಂದರ ಕೈವಾಡವಿದೆ ಅನ್ನೋ ಶಂಕೆ ವ್ಯಕ್ತವಾಗಿದೆ. ಆ ನಿಟ್ಟಿನಲ್ಲಿ ತನಿಖೆ ಮಾಡಲಾಗ್ತಿದೆ. ಇದೀಗ ಬಂಧಿಸಿರುವ ಐವರ ವಿಚಾರಣೆ ನಡೆದಿದೆ. ಇತರೆ ಆರೋಪಿಗಳಿಗೆ ಬಲೆ ಬೀಸಲಾಗಿದೆ. ಈ ಬಗ್ಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಭಾನುವಾರ ರಾತ್ರಿ ಸುಮಾರು 11.45ರ ಸುಮಾರಿಗೆ ಮದುವೆ ಸಮಾರಂಭದಲ್ಲಿ ಭಾಗವಹಿಸಿ ವಾಪಸ್ ಆಗುತ್ತಿದ್ದ ವೇಳೆ, ಫರ್ಹಾನ ಪಾಷಾ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಅವರನ್ನ ತಕ್ಷಣ ಕೊಲಂಬಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೇಗ ಗುಣಮುಖರಾಗ್ಲಿ ಎಂದು ಅವರ ಅಭಿಮಾನಿಗಳು ದೇವರಲ್ಲಿ ಬೇಡಿಕೊಳ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!