ಪ್ರಜಾಸ್ತ್ರ ಸುದ್ದಿ
ಚಾಮರಾಜನಗರ: ಕಟ್ಟಡ ಕೆಲಸ ಮಾಡುವ ಕಾರ್ಮಿಕರನ್ನು ಕರೆದುಕೊಂಡು ಹೊರಟ್ಟಿದ್ದ ಟಾಟಾ ಏಸ್ ವಾಹನ ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟಿದ್ದು, 8 ಜನರು ಗಾಯಗೊಂಡಿದ್ದಾರೆ. ತಾಲೂಕಿನ ಉಗೇನದಹುಂಡಿ ಹತ್ತಿರ ಅಪಘಾತ ಸಂಭವಿಸಿದೆ.
ಮೂಡಲ ಅಗ್ರಹಾರದ ಕೆಂಪರಾಜು(27) ಮೃತದುರ್ದೈವಿ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಾಮರಾಜನಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.