ತೀಸ್ತಾ ಪರ ಧ್ವನಿ ಎತ್ತಿದ ವಿಶ್ವಸಂಸ್ಥೆ ಅಧಿಕಾರಿ

274

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಬಂಧನವನ್ನು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ರಕ್ಷಕರ ವಿಶೇಷ ಅಧಿಕಾರಿ ಮೇರಿ ಲಾಲರ್ ಖಂಡಿಸಿದ್ದಾರೆ. ಮಾನವ ಹಕ್ಕುಗಳನ್ನು ರಕ್ಷಿಸುವುದು ಅಪರಾಧವಲ್ಲವೆಂದು ಹೇಳಿದ್ದಾರೆ.

ತೀಸ್ತಾ ದ್ವೇಷ ಹಾಗೂ ತಾರತಮ್ಯದ ವಿರುದ್ಧದ ಧ್ವನಿಯಾಗಿದ್ದಾರೆ ಎಂದು ಹೇಳಿದ್ದಾರೆ. 2002ರ ಗೋದ್ರಾ ಹತ್ಯಾಕಾಂಡದ ಪ್ರಕರಣದಲ್ಲಿ ಅಂದಿನ ಗುಜರಾತ್ ಸಿಎಂ, ಇಂದಿನ ಪ್ರಧಾನಿ ಮೋದಿ ಸೇರಿ 66 ಜನರಿಗೆ ಕ್ಲೀನ್ ಚಿಟ್ ಶುಕ್ರವಾರ ಸುಪ್ರೀಂ ಕೋರ್ಟ್ ನೀಡಿತು. ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಸುದ್ದಿ ಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿದರು. ಸಂಜೆಯೊಳಗೆ ತೀಸ್ತಾ ಬಂಧನವಾಯಿತು. 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತೀಸ್ತಾ ಬಂಧನಕ್ಕೆ ದೇಶ ಸೇರಿದಂತೆ ವಿಶ್ವದ ವಿವಿಧ ದೇಶಗಳಲ್ಲಿ ಖಂಡನೆ ವ್ಯಕ್ತವಾಗಿದೆ. ವಿಪಕ್ಷಗಳು ಸಹ ಇದನ್ನು ಬಲವಾಗಿ ಖಂಡಿಸಿವೆ.




Leave a Reply

Your email address will not be published. Required fields are marked *

error: Content is protected !!