ಪ್ರಜಾಸ್ತ್ರ ಸುದ್ದಿ
ನವದೆಹಲಿ: ಕಳೆದ ಬುಧವಾರ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿಜೆಪಿ ತೇಜಸ್ವಿನಿಗೌಡ ಇಂದು ದೆಹಲಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ನೇತೃತ್ವದಲ್ಲಿ ಕೈ ಪಕ್ಷ ಸೇರಿದ್ದಾರೆ.
ಬುಧವಾರ ತೇತಜಸ್ವಿನಿಗೌಡ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರಿಗೆ ರಾಜೀನಾಮೆ ಸಲ್ಲಿಸಿದ್ದರು. ಇವರ ಅವಧಿ ಜೂನ್ ಗೆ ಮುಗಿಯುತ್ತೆ. ಹೀಗಾಗಿ ಮನವೊಲಿಸುವ ಪ್ರಯತ್ನವನ್ನು ಮಾಡಿದೆ ಎಂದು ಹೊರಟ್ಟಿ ಹೇಳಿದ್ದಾರೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಇದಕ್ಕಾಗಿ ಅವರು ನಡೆಸಿದ ಪ್ರಯತ್ನ ಯಶಸ್ವಿಯಾಗಿಲ್ಲ. ಹೀಗಾಗಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಈ ಮೂಲಕ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಬಂದಂತಾಗಿದೆ.