ದೇಗುಲಗಳ ಜೀರ್ಣೋದ್ಧಾರ ಅನುದಾನ ತಡೆ ಆದೇಶ ವಾಪಸ್

184

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ದೇವಸ್ಥಾನಗಳ ಜೀರ್ಣೋದ್ಧಾರ ಅನುದಾನ ಬಿಡುಗಡೆಗೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ತಡೆ ನೀಡುವಂತೆ ಆದೇಶಿಸಿದ್ದರು. ಆಯುಕ್ತರ ಆದೇಶವನ್ನು ಹಿಂದಕ್ಕೆ ಪಡೆಯಬೇಕು ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ.

2022-23ನೇ ಸಾಲಿನಲ್ಲಿ ಬಿಡುಗಡೆಯಾದ ಅನುದಾನದಿಂದ ಯಾವುದೇ ಕಾಮಗಾರಿ ನಡೆಯದಿದ್ದರೆ, ಅನುದಾನ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸಿದ್ದರೆ, ಶೇಕಡ 50ರಷ್ಟು ಅನುದಾನ ಬಿಡುಗಡೆ ಅನುಮೋದನೆ ನೀಡಿದ್ದರೆ ತಡೆ ನೀಡಬೇಕು ಎಂದು ಇಲಾಖೆ ಆಯುಕ್ತರು ಆದೇಶಿಸಿದ್ದರು.

ಈ ವಿಚಾರ ಸಚಿವ ರಾಮಲಿಂಗಾ ರೆಡ್ಡಿ ಅವರ ಗಮನಕ್ಕೆ ಬರುತ್ತಿದ್ದಂತೆ ಆದೇಶವನ್ನು ವಾಪಸ್ ಪಡೆಯಬೇಕೆಂದು ಸೂಚಿಸಿದರು. ಹೀಗಾಗಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಆದೇಶ ಹಿಂಪಡೆದಿದ್ದು, ಗೊಂದಲಕ್ಕೆ ತೆರೆ ಬಿದ್ದಿದೆ.




Leave a Reply

Your email address will not be published. Required fields are marked *

error: Content is protected !!