ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಸರ್ಕಾರದಿಂದಲೇ ದೇವಸ್ಥಾನಗಳ ತೆರವು ಕಾರ್ಯ ನಡೆಯುತ್ತಿದೆ. ಇನ್ನೊಂದು ಕಡೆ ಬಿಜೆಪಿಯ ಅಂಗಪಕ್ಷಗಳಿಂದಲೇ ಪ್ರತಿಭಟನೆ ನಡೆಸುವ ಕೆಲಸ ಮಾಡಲಾಗುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಹಿಂದೂ ಜಾಗರಣ ಸಮಿತಿ ಬಿಜೆಪಿಯ ಅಂಗಪಕ್ಷ. ಇವರು ಯಾರ ವಿರುದ್ಧ ಪ್ರತಿಭಟನೆ ಮಾಡುತ್ತಾರೆ. ಜನರನ್ನು ಡೈವರ್ಟ್ ಮಾಡಲು ಈ ರೀತಿಯಾದ ಕೆಲಸ ಮಾಡಲಾಗುತ್ತಿದೆ. ದೇವಸ್ಥಾನಗಳ ತೆರವಿಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದರೆ, ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಬೇಕಿತ್ತು. ಇದನ್ನು ಬಿಟ್ಟು ಜನರನ್ನು ಗೊಂದಲಕ್ಕೆ ತಳ್ಳುವ ಕೆಲಸ ಸರಿಯಲ್ಲವೆಂದು ಹೆಚ್.ಡಿ ಕುಮಾರಸ್ವಾಮಿ ಕಿಡಿ ಕಾರಿದರು.