ಪ್ರಜಾಸ್ತ್ರ ಸುದ್ದಿ
ವಿಜಯಪುರ: ಬಬಲೇಶ್ವರ ಹಾಗೂ ಸಾರವಾಡ ಮಧ್ಯ ಕೋಳಿ ಸಾಗಾಣಿಕಾ ವಾಹನ ಪಲ್ಟಿಯಾಗಿರುವ ಘಟನೆ ಗುರುವಾರ ನಡೆದಿದೆ.
ಘಟನೆ ಬಗ್ಗೆ 112ಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಪೊಲೀಸರು ಹೋಗಿ ಪರಿಶೀಲನೆ ನಡೆಸಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದ್ದು, ಮುಂದಿನ ಕ್ರಮಕ್ಕಾಗಿ ಬಬಲೇಶ್ವರ ಠಾಣೆಗೆ ಮಾಹಿತಿ ನೀಡಲಾಗಿದೆ.