ಗೋಲಗೇರಿಯಲ್ಲಿ ರಥದ ಮೇಲಿಂದ ಬಿದ್ದು ವ್ಯಕ್ತಿ ಸಾವು

779

ಪ್ರಜಾಸ್ತ್ರ ಸುದ್ದಿ

ಸಿಂದಗಿ: ತಾಲೂಕಿನ ಗೋಲಗೇರಿ ಗೊಲ್ಲಾಳೇಶ್ವರ ಜಾತ್ರೆ ನಿಮಿತ್ಯ ನಡೆಯುವ ರಥೋತ್ಸವದ ವೇಳೆ ತೇರಿನ ಕಳಸ ಕಟ್ಟುವ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ಸಂಜೆ ಸುಮಾರು 5.30ಕ್ಕೆ ಈ ಘಟನೆ ನಡೆದಿದೆ.

ಮುದಕಣ್ಣ ಕಾಚಪೂರ(55) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಈತ ಕಳೆದ 15 ವರ್ಷಗಳಿಂದ ರಥದ ಸಿದ್ಧತೆ ಮಾಡುವ ಕೆಲಸ ಮಾಡಿಕೊಂಡು ಬರುತ್ತಿದ್ದರು. ಇದೆ ವೇಳೆ ಮತ್ತೋರ್ವ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಹಿನ್ನೆಲೆಯಲ್ಲಿ ಈ ವರ್ಷ ರಥೋತ್ಸವ ಸ್ಥಗಿತಗೊಳಿಸಲಾಗಿದೆ. ಪ್ರತಿ ವರ್ಷ ದವನದ ಹುಣ್ಣಿಮೆಯಂದು ಜಾತ್ರಾ ಮಹೋತ್ಸವ ನಡೆಯುತ್ತೆ. ಆದ್ರೆ ಈ ಬಾರಿ ದುರಂತವೊಂದು ನಡೆದು ರಥೋತ್ಸವ ನಿಲ್ಲಿಸಲಾಗಿದೆ ಎಂದು ತಿಳಿದು ಬಂದಿದೆ.




Leave a Reply

Your email address will not be published. Required fields are marked *

error: Content is protected !!