ಶಿಕ್ಷಣ ಸಚಿವರಿಗೆ ದಾಖಲೆ ಸಮೇತ ಬರಗೂರು ತಿರುಗೇಟು

270

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಶಾಲೆಗಳ ಪಠ್ಯಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ದೊಡ್ಡ ಚರ್ಚೆ ನಡೆದಿದೆ. ಮಕ್ಕಳಿಗೆ ವಿವಾದಾತ್ಮಕ, ಸುಳ್ಳಿನ, ಕೋಮುವಾದದ ಕುರಿತು ತಿಳಿಸುವ ವಿಚಾರಗಳನ್ನು ಸೇರಿಸಲಾಗಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ಇನ್ನು ಈ ಹಿಂದೆ ಕುವೆಂಪು, ಅಂಬೇಡ್ಕರ್, ಗಾಂಧಿ, ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಅಬ್ಬಕ್ಕ, ಮದಕರಿ ನಾಯಕ, ಕೆಂಪೇಗೌಡರ ಪಠ್ಯಗಳನ್ನು ಕೈ ಬಿಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.

ಸಚಿವರ ಹೇಳಿಕೆಗೆ ಪತ್ರದ ಮೂಲಕ ತಿರುಗೇಟು ನೀಡಿರುವ ಪಠ್ಯಪುಸ್ತಕ ಪರಿಷ್ಕರಣ ಸಮಿತಿಯ ಮಾಜಿ ಅಧ್ಯಕ್ಷ, ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು, ತಮ್ಮ ಲೆಟರ್ ಹೆಡ್ ಮೂಲಕ ಸಚಿವರಿಗೆ ಉತ್ತರಿಸಿದ್ದಾರೆ. ಸಚಿವರು ವಾದಕ್ಕೆ ಇಳಿಯುವ ಬದಲು ವಿವಾದವನ್ನು ಬಗೆಹರಿಸಿ ಶೈಕ್ಷಣಿಕ ಕ್ಷೇತ್ರದ ಘನತೆಯನ್ನು ಕಾಪಾಡಲಿ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!