ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ರಾಜ್ಯದಲ್ಲಿ ಸಾಕಷ್ಟು ವಿವಾದ ಪಡೆದುಕೊಂಡಿದೆ. ಹೋರಾಟಗಳು ನಡೆದಿವೆ. ಈ ಬಗ್ಗೆ ಮಾತನಾಡಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸುತ್ತೇವೆ ಎಂದಿದ್ದಾರೆ.
ಬರಗೂರು ರಾಮಚಂದ್ರಪ್ಪ ಸಮಿತಿ ಏನು ಮಾಡಿತ್ತು, ನಾವು ಏನು ಮಾಡಿದ್ದೇವೆ ಅನ್ನೋದು ಜನರಿಗೆ ತಿಳಿಯಲಿ. ಅಂಬೇಡ್ಕರ್ ಅವರ ಪಠ್ಯದಲ್ಲಿ ಕೈ ಬಿಟ್ಟಿದ್ದ ಸಂವಿಧಾನ ಶಿಲ್ಪಿ ಅನ್ನೋದು ಹಾಗು ಬಸವಣ್ಣನವರ ಕುರಿತಾದ ಸಾಲುಗಳನ್ನು ಸೇರಿಸಿ ಪ್ರತ್ಯೇಕ ಮುದ್ರಿಸಿ ಶಾಲೆಗಳಿಗೆ ಪೂರೈಸಲಾಗುವುದು ಎಂದಿದ್ದಾರೆ.