ಪಠ್ಯಪುಸ್ತಕ ಪರಿಷ್ಕರಣೆ ವಿವಾದ: ಕಾಂಗ್ರೆಸ್ ಪ್ರತಿಭಟನೆ

282

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿ ಶಾಲೆಗಳ ಪಠ್ಯಪುಸ್ತಕ ಪರಿಷ್ಕರಣೆ ಮಾಡಿರೋದು ಸಾಕಷ್ಟು ವಿವಾದ ಪಡೆದುಕೊಂಡಿದೆ. ಇದನ್ನು ಖಂಡಿಸಿ ಕಾಂಗ್ರೆಸ್ ವಿಧಾನಸೌಧದ ಮುಂದಿನ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, ಪರಿಷತ್ ಸದಸ್ಯ ಸಲೀಂ ಸೇರಿದಂತೆ ಕಾಂಗ್ರೆಸ್ ನಾಯಕರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ನ್ಯಾಯಕ್ಕಾಗಿ ಎಂಥಾ ಹೋರಾಟಕ್ಕೂ ಸಿದ್ಧ. ಆದರೆ, ಅನ್ಯಾಯಕ್ಕೆ ಶರಣಾಗುವುದಿಲ್ಲ ಎನ್ನುತ್ತಿದ್ದಾರೆ.

ಅಂಬೇಡ್ಕರ್, ಬಸವಣ್ಣ, ಭಗತ್ ಸಿಂಗ್, ಕುವೆಂಪು ಅನೇಕ ಮಹಾನ್ ವ್ಯಕ್ತಿಗಳನ್ನು ಅವಮಾನ ಮಾಡಲಾಗಿದೆ. ಸುಳ್ಳು, ಕೋಮುದ್ವೇಷ ಹರಡುತ್ತಿದೆ. ತನ್ನ ರಾಜಕೀಯ  ದುರುದ್ದೇಶ ಹೊಂದಿದೆ. ಕೂಡಲೇ ಪರಿಷ್ಕರಣೆ ಪಠ್ಯಪುಸ್ತಕ ವಾಪಸ್ ಪಡೆದು, ಹಳೆಯ ಪುಸ್ತಕಗಳನ್ನೇ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!