ನಾನು ಯಾವತ್ತೂ ನಿಮಗೆ ಚಿರಋಣಿ ಎಂದು ಪಂತ್

248

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಮುಂಬೈ: ಇಂಡಿಯನ್ ಕ್ರಿಕೆಟ್ ಟೀಂ ಯುವ ಸ್ಟಾರ್ ಆಟಗಾರ ರಿಷಬ್ ಪಂತ್, ಅಪಘಾತವಾದ ಬಳಿಕ ಮೊದಲ ಬಾರಿಗೆ ಟ್ವೀಟ್ ಮಾಡಿದ್ದಾರೆ. ಡಿಸೆಂಬರ್ 30, 2022ರ ಬೆಳಗಿನ ಜಾವ ನಡೆದ ಅಪಘಾತದಲ್ಲಿ ತಮ್ಮನ್ನು ರಕ್ಷಿಸಿ ಜೀವ ಉಳಿಸಿದವರಿಗೆ ಕೃತ್ಞತೆ ಸಲ್ಲಿಸಿದ್ದಾರೆ.

ತಮ್ಮ ಟ್ವೀಟರ್ ನಲ್ಲಿ ಆ ಇಬ್ಬರು ಯುವಕರ ಫೋಟೋವನ್ನು ಹಂಚಿಕೊಂಡಿದ್ದು ರಜತ್ ಕುಮಾರ್ ಹಾಗೂ ನಿಶು ಕುಮಾರ್ ಅವರನ್ನು ನಾನು ಎಂದಿಗೂ ಮರೆಯುವುದಿಲ್ಲ. ವೈಯಕ್ತಿಕವಾಗಿ ಎಲ್ಲರಿಗೂ ಧನ್ಯವಾದಗಳನ್ನು ಹೇಳಲು ಆಗದೆ ಇರಬಹುದು. ಆದರೆ, ಈ ಇಬ್ಬರು ವೀರರನ್ನು ಸ್ಮರಿಸಬೇಕು. ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.

ಕಳೆದ ಡಿಸೆಂಬರ್ 30, 2022ರ ಬೆಳಗಿನ ಜಾವ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ರಿಷಬ್ ಪಂತ್ ಕಾರು ಭೀಕರ ಅಪಘಾತಕ್ಕೆ ಒಳಗಾಯಿತು. ಈ ದೃಶ್ಯ ಸಿಸಿಟಿವಿಯಲ್ಲಿಯೂ ಸೆರೆಯಾಗಿದೆ. ಇದರಿಂದಾಗಿ ಪಂತ್ ಗಂಭೀರವಾಗಿ ಗಾಯಗೊಂಡಿದ್ದು, ಬೆನ್ನಿಗೆ ಸುಟ್ಟ ಗಾಯಗಳಾಗಿವೆ. ಕಣ್ಣಿಗೆ ಹಾನಿಯಾಗಿದೆ. ಪ್ಲಾಸ್ಟಿಕ್ ಸರ್ಜರಿ ಮಾಡಲಾಗಿದ್ದು, ಇನ್ನು ಚಿಕಿತ್ಸೆ ಮುಂದುವರೆಸಲಾಗಿದೆ.




Leave a Reply

Your email address will not be published. Required fields are marked *

error: Content is protected !!