ಸಿಂದಗಿ ಜನತೆಗೆ ಧನ್ಯವಾದಗಳು: ಪಕ್ಷೇತರ ಅಭ್ಯರ್ಥಿ ನಾಯ್ಕೋಡಿ

221

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಕರ್ನಾಟಕ ವಿಧಾನಸಭಾ ಚುನಾವಣೆ-2023ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಮಹ್ಮದ ಮುಸ್ತಾಕ ನಾಯ್ಕೋಡಿ, ಕ್ಷೇತ್ರದ ಜನತೆಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಪಟ್ಟಣದಲ್ಲಿ ಮಾತನಾಡಿದ ಅವರು, ಮೇ 10ರಂದು ನಡೆದ ಮತದಾನದಲ್ಲಿ ತಮ್ಮ ಹಕ್ಕು ಚಲಾಯಿಸುವ ಮೂಲಕ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದೀರಿ. ನನಗೆ ಸಹಕಾರ ನೀಡಿದ ನನ್ನ ಬೆಂಬಲಿಗರು, ಕಾರ್ಯಕರ್ತರು, ಸಿಂದಗಿ ಭಾಗದ ಮತದಾರ ಬಂಧುಗಳು ತುಂಬು ಹೃದಯದ ಧನ್ಯವಾದಗಳು. ಸರ್ವರಿಗೂ ಸಮಪಾಲು ಸಮಬಾಳು ಅನ್ನೋ ತತ್ವದಡಿ ಕೆಲಸ ಮಾಡುತ್ತಿದ್ದು, ಮುಂದೆಯೂ ಇದೆ ರೀತಿ ಕೆಲಸ ಮಾಡುವುದಾಗಿ ಹೇಳಿದರು.

ಈ ವೇಳೆ ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚನ್ನಪ್ಪಗೌಡ ಎಸ್.ಬಿರಾದಾರ, ತಾಲೂಕು ಅಧ್ಯಕ್ಷ ಸಂತೋಷ ಮನಗೂಳಿ, ತಾಲೂಕು ಉಪಾಧ್ಯಕ್ಷರಾದ ಮುನ್ನಾ ಮುಜಾವರ, ಮಂಜುನಾಥ ಪತ್ತಾರ, ಸಾದೀಕ್ ಆಲಮೇಲ, ಸಮೀರ ಬಳಾರಿ, ಚಂದ್ರು ಡಾಂಗಿ ಸೇರಿ ಇತರರು ಉಪಸ್ಥಿತರಿದ್ದರು.




Leave a Reply

Your email address will not be published. Required fields are marked *

error: Content is protected !!