ಕರ್ನಾಟಕ ರಾಜ್ಯಪಾಲರಾಗಿ ಗೆಹ್ಲೋಟ್ ಪ್ರಮಾಣ ವಚನ

234

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ್ರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ ಶ್ರೀನಿವಾಸ ಓಕಾ ಪ್ರಮಾಣ ವಚನ ಬೋಧಿಸಿದ್ರು.

ಪ್ರಮಾಣ ವಚನ ಸಂದರ್ಭದಲ್ಲಿ ನಿರ್ಗಮಿತ ರಾಜ್ಯಪಾಲ ವಜುಭಾಯಿ ವಾಲಾ ಹಾಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವೇದಿಕೆ ಮೇಲಿದ್ದರು. ಈ ವೇಳೆ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ ರಾಷ್ಟ್ರಪತಿ ಅವರಿಂದ ಸ್ವೀಕೃತವಾದ ಆದೇಶ ಪತ್ರ ಓದಿದರು.

ಈ ವೇಳೆ ಆಡಳಿತ ಪಕ್ಷದ ಬಹುತೇಕ ಸಚಿವರು, ವಿಧಾನ ಪರಿಷತ್ ಸದಸ್ಯರು, ವಿರೋಧ ಪಕ್ಷದ ನಾಯಕರು, ಪೊಲೀಸ್ ಇಲಾಖೆಯ ಮುಖ್ಯಸ್ಥರು, ವಿವಿಧ ಇಲಾಖೆಯ ಮುಖ್ಯಸ್ಥರು ಸೇರಿದಂತೆ ಪ್ರಮುಖರು ಭಾಗವಹಿಸಿದ್ರು.




Leave a Reply

Your email address will not be published. Required fields are marked *

error: Content is protected !!