ಇದು ಉಗ್ರರ ಕೃತ್ಯ: ಡಿಜಿಪಿ ಪ್ರವೀಣ್ ಸೂದ್

287

ಪ್ರಜಾಸ್ತ್ರ ಸುದ್ದಿ

ಮಂಗಳೂರು: ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿಯಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ಬೆಂಕಿಕಾಣಿಸಿಕೊಂಡು ಚಾಲಕ ಹಾಗೂ ಪ್ರಯಾಣಿಕ ಗಾಯಗೊಂಡಿದ್ದಾರೆ. ರಿಕ್ಷಾದಲ್ಲಿ ಸ್ಫೋಟಗೊಂಡ ಸ್ಥಿತಿಯಲ್ಲಿ ಕುಕ್ಕರ್ ಪತ್ತೆಯಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಡಿಜಿಪಿ ಪ್ರವೀಣ್ ಸೂದ್ ಅವರು, ಇದೊಂದು ಆಕಸ್ಮಿಕ ಸ್ಫೋಟವಲ್ಲ. ಉಗ್ರರ ಕೃತ್ಯ. ದೊಡ್ಡ ಪ್ರಮಾಣದಲ್ಲಿ ಹಾನಿ ಮಾಡುವ ಉದ್ದೇಶದಿಂದ ಕೃತ್ಯ ಎಸಗಲಾಗಿದೆ. ಪ್ರಯಾಣಿಕ ಗೊಂದಲದ ಹೇಳಿಕೆಗಳನ್ನು ಬೇರೆ ನೀಡಿದ್ದಾನೆ. ಈ ಬಗ್ಗೆ ರಾಜ್ಯ ಪೊಲೀಸರು ಕೇಂದ್ರ ತನಿಖಾ ತಂಡದೊಂದಿಗೆ ತನಿಖೆ ನಡೆಸಿದ್ದಾರೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!