ಪ್ರಜಾಸ್ತ್ರ ಸುದ್ದಿ
ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸಿದ ನಂತರ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನಾವು ದ್ವೇಷದ ಮಾರುಕಟ್ಟೆ ಮುಚ್ಚಿದ್ದೇವೆ. ಪ್ರೀತಿಯ ಅಂಗಡಿಗಳನ್ನು ತೆರೆದಿದ್ದೇವೆ. ಕರ್ನಾಟಕದಲ್ಲಿ ನಾವು ಪ್ರೀತಿಯಿಂದ ಚುನಾವಣೆ ಎದುರಿಸಿದ್ದೇವೆ. ದ್ವೇಷದಿಂದ ಅಲ್ಲ ಎಂದರು.
ನವದೆಹಲಿಯಲ್ಲಿ ಕೇಂದ್ರ ಕಚೇರಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಜನತೆಗೆ, ಪಕ್ಷದ ನಾಯಕರಿಗೆ, ಮುಖಂಡರಿಗೆ, ಕಾರ್ಯಕರ್ತರಿಗೆ ತುಂಬು ಹೃದಯದ ಧನ್ಯವಾದಗಳು. ವಿಭಜಕ ಕೆಲಸಗಳನ್ನು ಅವರು ಮಾಡಲಿಲ್ಲ. ಕೂಡಿಸುವ ಕೆಲಸ ಮಾಡಿದರು ಅಂತಾ ಹೇಳಿದರು.
ಇನ್ನು ಈ ವರ್ಷದಲ್ಲಿ ಮಧ್ಯಪ್ರದೇಶ, ಛತ್ತೀಸಗಡ, ರಾಜಸ್ಥಾನ ಹಾಗೂ ತೆಲಂಗಾಣದಲ್ಲಿ ಚುನಾವಣೆ ನಡೆಯುತ್ತೆ. ಅಲ್ಲಿಯೂ ಈ ಫಲಿತಾಂಶ ಬರಲಿದೆ ಎಂದಿದ್ದಾರೆ.