ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಳ್ಳತನ ಪ್ರಕರಣದ ಆರೋಪಿಯನ್ನ ಬಂಧಿಸಲು ಹೋದಾಗ ಪಿಎಸ್ಐ ಮೇಲೆ ಲಾಂಗ್ ನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಪಿಎಸ್ಐ ಹರಿನಾಥ ಎಂಬುವರ ಮೇಲೆ ಆರೋಪಿ ಅಪ್ಟೆನ್ ಎಂಬಾತ ಹಲ್ಲೆ ಮಾಡಿದ್ದಾನೆ.
ವೈಟ್ ಫೀಲ್ಡ್ ಏರಿಯಾದಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಅಫ್ಟೆನ್ ಭಾಗಿಯಾಗಿದ್ದ. ಬಳಿಕ ಈತ ತಲೆ ಮರೆಸಿಕೊಂಡಿದ್ದ. ಕೆಜಿಎಫ್ ವ್ಯಾಪ್ತಿಯಲ್ಲಿ ಇರುವ ಬಗ್ಗೆ ಮಾಹಿತಿ ಬಂದಿತ್ತು. ಹೀಗಾಗಿ ಪಿಎಸ್ಐ ಹಾಗೂ ಸಿಬ್ಬಂದಿ ಬುಧವಾರ ರಾತ್ರಿ ಹೋದಾಗ ಲಾಂಗ್ ನಿಂದ ಬಲಗೈಗೆ ಹಲ್ಲೆ ಮಾಡಿದ್ದಾನೆ. ಆಗ ಹರಿನಾಥ ರಕ್ಷಣೆಗೆ ಗುಂಡು ಹಾರಿಸಿದಾಗ ಪರಿಯಾಗಿದ್ದಾನೆ. ಪಿಎಸ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.