ಗುಮ್ಮಟನಗರಿಯಲ್ಲಿ ಕಿಲಾಡಿ ಕಳ್ಳ ಅರೆಸ್ಟ್

278

ಪ್ರಜಾಸ್ತ್ರ ಅಪರಾಧ ಸುದ್ದಿ

ವಿಜಯಪುರ: ಬೈಕ್ ಹಾಗೂ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಗಣೇಶ ಸುಭಾಸ ಪವಾರ(19) ಎಂಬಾತನ ಬಳಿಯಿದ್ದ 5 ಲಕ್ಷಕ್ಕಿಂತ ಹೆಚ್ಚಿನ ಮೌಲ್ಯದ ಬೈಕ್ ಹಾಗೂ ಚಿನ್ನಾಭರಣವನ್ನು ಜಪ್ತಿ ಮಾಡಿದ್ದಾರೆ.

ಮೂಲತಃ ಬಾಗಲಕೋಟೆ ನವನಗರ ಹಾಗೂ ವಿಜಯಪುರದ ಗಾಂಧಿನಗರ ನಿವಾಸಿ ಗಣೇಶ, ಸರಾಫ್ ಬಜಾರ್‍ ದಲ್ಲಿ ಸಂಶಯಾಸ್ಪದವಾಗಿ ತಿರುಗುತ್ತಿದ್ದಾಗ ಸಿಕ್ಕಿ ಬಿದ್ದಿದ್ದಾನೆ. ವಿಚಾರಣೆ ನಡೆಸಿದಾಗ ರಹೀಮ್ ನಗರ ಹಾಗೂ ಮದೀನಾ ನಗರದ ಮನೆಗಳಲ್ಲಿ ಚಿನ್ನಾಭರಣ ಕಳ್ಳತನ ಮಾಡಿರುವ ಕುರಿತು ತಪ್ಪೊಪ್ಪಿಕೊಂಡಿದ್ದಾನೆ.

5,09,500 ಮೌಲ್ಯದ 95 ಗ್ರಾಂ ಬಂಗಾರ, 270 ಗ್ರಾಂ ಬೆಳ್ಳಿ ಆಭರಣ ಸೇರಿದಂತೆ ಬೈಕ್‍ ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಕುರಿತು ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!