ಪ್ರಜಾಸ್ತ್ರ ಸುದ್ದಿ
ದೇವರಹಿಪ್ಪರಗಿ: ವಿಜಯಪುರ ಜಿಲ್ಲೆಯ ತಾಲೂಕಿನಲ್ಲಿ ಐತಿಹಾಸಿಕ ಕಲ್ಮೇಶ್ವರ ದೇವಸ್ಥಾನದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಮಧ್ಯರಾತ್ರಿ ಕಲ್ಮೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿರುವ ಹುಂಡಿಯನ್ನ ಕಳ್ಳತನ ಮಾಡಲಾಗಿದೆ.
ದೇವಸ್ಥಾನದ ಪೂಜಾರಿ ಪೂಜೆಗೆಂದು ಬಂದು ನೋಡಿದಾಗ ಗರ್ಭ ಗುಡಿಯಲ್ಲಿ ಹಣ ಬಿದ್ದಿದ್ದನ್ನ ಕಂಡು ಸ್ಥಳೀಯರಿಗೆ ತಿಳಿಸಿದ್ದಾರೆ. ಬಳಿಕ ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಲಾಗಿದೆ. ಅದರಲ್ಲಿ ಕಳ್ಳರ ಚಲನವಲನ ದಾಖಲಾಗಿದೆ. ಕಳ್ಳರನ್ನ ಆದಷ್ಟು ಬೇಗ ಹಿಡಿಯಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.