ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜಧಾನಿಯಲ್ಲಿ ಯಾರೆಲ್ಲ ರಾಜಕಾಲುವೆ ಒತ್ತುವರಿ ಮಾಡಿಕೊಂಡು ಬಿಲ್ಡಿಂಗ್ ಕಟ್ಟಿದ್ದಾರೋ ಅವುಗಳನ್ನು ತೆರವುಗೊಳಿಸಲು ಹೈಕೋರ್ಟ್ ಸಹ ಬಿಬಿಎಂಪಿಗೆ ಸೂಚನೆ ನೀಡಿದೆ. ಈ ಬಗ್ಗೆ ಮಾತನಾಡಿರುವ ಕಂದಾಯ ಸಚಿವ ಆರ್.ಅಶೋಕ್, ರಾಜಕಾಲುವೆ ಒತ್ತುವರಿ ತೆರವಿನಲ್ಲಿ ಯಾವುದೇ ತಾರತಮ್ಯವಿಲ್ಲ ಎಂದಿದ್ದಾರೆ.
ಸೋಮವಾರ ಬುಲ್ಡೋಜರ್ ಕೆಲಸ ಮಾಡಿವೆ. ಇಂದು ಸಹ ಕೆಲಸ ಮಾಡುತ್ತಿವೆ. ಹಿಂದಿನ ಸರ್ಕಾರ ಮಳೆ ಬಂದಾಗ ಮಾತ್ರ ಡೆಮಾಲಿಶನ್ ನಾಟಕ ಮಾಡಿತ್ತು. ಆದರೆ, ನಮ್ಮ ಸರ್ಕಾರ ಯಾವುದೇ ತಾರತಮ್ಯ ಮಾಡದೆ ಎಲ್ಲ ಕಟ್ಟಡಗಳನ್ನು ತೆರವುಗೊಳಿಸಲು ಸೂಚಿಸಲಾಗಿದೆ ಎಂದರು.
ಒತ್ತುವರಿ ತೆರವು ಅನ್ನೋದು ಬರೀ ಜನಸಾಮಾನ್ಯರಿಗೆ ಮಾತ್ರ ಅನ್ವಿಸದೆ, ಪ್ರಭಾವಿಗಳು ಸೇರಿದಂತೆ ಯಾರೆಲ್ಲ ಒತ್ತುವರಿ ಮಾಡಿದ್ದಾರೋ ಅವೆಲ್ಲವನ್ನೂ ತೆರವುಗೊಳಿಸಬೇಕು ಅನ್ನೋ ಕೂಗು ಎದ್ದಿದೆ.