ಪ್ರಜಾಸ್ತ್ರ ಸುದ್ದಿ
ವಿಜಯಪುರ: ಜಿಲ್ಲೆಯ ತಾಳಿಕೋಟೆ ತಾಲೂಕಿನ ನೀರಲಗಿ ಗ್ರಾಮದ ಮಹಿಳೆಯೊಬ್ಬರ 3.8 ತೊಲೆ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದ ಕಳ್ಳನನ್ನ ಬಂಧಿಸಲಾಗಿದೆ. ಅಮರೇಶ ಕ್ವಾಟಿ ಬಂಧಿತ ಆರೋಪಿಯಾಗಿದ್ದಾನೆ.
ತಾಳಿಕೋಟೆ ಬಸ್ ನಿಲ್ದಾಣದ ಹತ್ತಿರದಲ್ಲಿ ಚಿನ್ನದ ಸರ ಎಗರಿಸಿಕೊಂಡು ಪರಾರಿಯಾಗಿದ್ದ. ನಂತರ ಈತ ಮೂಕಿಹಾಳ ಹತ್ತಿರ ಅನುಮಾಸ್ಪದವಾಗಿ ಓಡಾಟ ಮಾಡ್ತಿದ್ದವನನ್ನು ಹಿಡಿದುಕೊಂಡು, ಪೊಲೀಸ್ ಭಾಷೆಯಲ್ಲಿ ವಿಚಾರಣೆ ನಡೆಸಿದಾಗಿ ಸತ್ಯ ಬಾಯಿಬಿಟ್ಟಿದ್ದಾನೆ. ಈ ಬಗ್ಗೆ ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.