ಪ್ರಜಾಸ್ತ್ರ ಸುದ್ದಿ
ನವದೆಹಲಿ: ಕೇರಳ ಸೇರಿದಂತೆ 15 ರಾಜ್ಯಗಳಲ್ಲಿ ಪಿಎಫ್ಐ ಹಾಗೂ ಎಸ್ ಡಿಪಿಐ ಸಂಘಟನೆಗಳ ಕಚೇರಿ, ನಾಯಕರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ ದಾಳಿ ನಡೆಸಿದೆ. ಇದನ್ನು ಖಂಡಿಸಿ ಕೇರಳ ಸೇರಿದಂತೆ ಅನೇಕರ ತೀವ್ರ ಹೋರಾಟ ನಡೆದಿದೆ.
ಪಿಎಫ್ಐ ಸಂಘಟನೆ ಉಗ್ರವಾದಕ್ಕೆ ಬೆಂಬಲ ನೀಡುತ್ತಿದೆ ಅನ್ನೋದರ ಕುರಿತು ಸಂಗ್ರಹಿಸಿದ ಸಾಕ್ಷಿಗಳ ಆಧಾರದ ಮೇಲೆ ಈ ಸಂಘಟನೆ ನಿಷೇಧಕ್ಕೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆಯಂತೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು ಸಭೆ ನಡೆಸಿ, ಪಿಎಫ್ಐ ನಿಷೇಧಕ್ಕೆ ಕಾನೂನು ಸಲಹೆ ಪಡೆಯಲಿದ್ದಾರಂತೆ.