ಇದು ಭಯೋತ್ಪಾದಕರ ಕೃತ್ಯ: ಕೆ.ಎಸ್ ಈಶ್ವರಪ್ಪ

103

ಪ್ರಜಾಸ್ತ್ರ ಸುದ್ದಿ

ಮೈಸೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ಕೆಫೆಯಲ್ಲಿ ನಡೆದಿರುವುದು ಬಾಂಬ್ ಸ್ಫೋಟ. ಇದು ಭಯೋತ್ಪಾದಕರ ಕೃತ್ಯವಲ್ಲದೇ ಮತ್ತೇನೆ ಅಂತಾ ಕೇಳಿದರು.

ಗುಪ್ತಚರ ಇಲಾಖೆಯ ವೈಫಲ್ಯವನ್ನು ಮುಖ್ಯಮಂತ್ರಿಗಳು ಮೊದಲು ಒಪ್ಪಿಕೊಳ್ಳಬೇಕು. ಮೊದಲು ಭಯೋತ್ಪಾದಕರನ್ನು ಪತ್ತೆ ಹಚ್ಚಬೇಕು ಎಂದು ಒತ್ತಾಯಿಸಿದರು. ನೀವು ಮುಸ್ಲಿಂರ ಪರ ಇರಿ. ಆದರೆ, ಭಯೋತ್ಪಾದಕರನ್ನು, ದೇಶದ್ರೋಹಿಗಳನ್ನು ರಕ್ಷಿಸಬೇಡಿ ಎಂದರು.

ವಿಧಾನಸೌಧ ಆವರಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಪ್ರಕರಣದ ಎಫ್ಎಸ್ಎಲ್ ವರದಿ ಬಹಿರಂಗಗೊಳಿಸಬೇಕು. ಅಂತಹ ಘಟನೆ ನಡೆದೇ ಇಲ್ಲವೆಂದು ಸಚಿವರು ಹೇಳುತ್ತಾರೆ. ನಮ್ಮ ಪ್ರಕಾರ ವರದಿ ಬಂದಿದೆ. ಸರ್ಕಾರ ಮುಚ್ಚಿಡುವ ಪ್ರಯತ್ನ ನಡೆಸಿದೆ ಎಂದು ಆರೋಪಿಸಿದರು.




Leave a Reply

Your email address will not be published. Required fields are marked *

error: Content is protected !!