ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ: ಬಿಜೆಪಿಯಿಂದ ಹೊರ ಬಂದು ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಜಗದೀಶ್ ಶೆಟ್ಟರ್, ಇದು ನನ್ನ ಕೊನೆಯ ಚುನಾವಣೆ. ಇದೊಂದು ಬಾರಿ ನನಗೆ ಅವಕಾಶ ನೀಡಿ ಎಂದಿದ್ದಾರೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಹಂಚುತ್ತಿರುವ ಕರಪತ್ರದಲ್ಲಿ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ.
ನಾನು ಎಂದಿಗೂ ಅಧಿಕಾರಕ್ಕೆ ಅಂಟಿಕೊಂಡಿಲ್ಲ. ನನ್ನ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ. ಮೊದಲಿನಿಂದಲೂ ತತ್ವ ಸಿದ್ಧಾಂತಕ್ಕೆ ಬದ್ಧನಾಗಿದ್ದವನು. ಕುಲಗೆಟ್ಟ ಹೋಗುತ್ತಿರುವ ವ್ಯವಸ್ಥೆಯಲ್ಲಿ ನಿರ್ದಿಷ್ಟ ಉದ್ದೇಶಕ್ಕಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ.
ಇದು ನನ್ನ ಕೊನೆಯ ಚುನಾವಣೆ. 6 ಬಾರಿ ಗೆಲ್ಲಿಸಿರುವ ಜನತೆ 7ನೇ ಬಾರಿಗೂ ಆಶೀರ್ವಾದ ಮಾಡುತ್ತಾರೆ. ಅವಧಿ ಮುಗಿದ ನಂತರ ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುತ್ತೇನೆ ಎಂದು ಹೇಳುವ ಮೂಲಕ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ.