‘ಇದು ನನ್ನ ಕೊನೆಯ ಚುನಾವಣೆ’

123

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಸಿಡಿ ಪ್ರಕರಣದಿಂದ ಸಚಿವ ಸ್ಥಾನ ಕಳೆದುಕೊಂಡ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಇದು ನನ್ನ ಕೊನೆಯ ಚುನಾವಣೆ ಎಂದು ಹೇಳಿದ್ದಾರೆ. ಗೋಕಾಕಿನಲ್ಲಿ ಮಾತನಾಡಿದ ಅವರು, 2023ರ ವಿಧಾನಸಭಾ ಚುನಾವಣೆ ಕೊನೆಯ ಚುನಾವಣೆ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ 5 ಬಾರಿ ಶಾಸಕನಾಗಿದ್ದೇನೆ. ನಾವು ನಾವೇ ಹೊಡೆದಾಡಬೇಕಿತ್ತು. ಈಗ ನಾನು ಬಿಜೆಪಿಯಲ್ಲಿದ್ದೇನೆ. ಈ ಬಾರಿಯದ್ದು ನನಗೆ ಕೊನೆಯ ಚುನಾವಣೆಯಾಗಿದ್ದು, 50 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲ್ಲಬೇಕು. ಒಂದೂವರೆ ವರ್ಷದಿಂದ ಸುಮ್ಮನಿದ್ದೆ. ಈಗ ಸರಿಯಾದ ಸಮಯಕ್ಕೆ ಯುದ್ಧ ಶುರುವಾಗಿದೆ ಅಂತಾ ಹೇಳಿದರು.

ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ರಮೇಶ ಜಾರಕಿಹೊಳಿ ನಡುವೆ ಜಿದ್ದಾಜಿದ್ದು ನಡೆಯುತ್ತಿದೆ. ತಮ್ಮ ಇವತ್ತಿನ ಪರಿಸ್ಥಿತಿಗೆ ಶಾಸಕಿಯೇ ಕಾರಣ ಅನ್ನೋದು ಜಾರಕಿಹೊಳಿ ಗಂಭೀರ ಆರೋಪ. ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಕೆಂಡ ಕಾರುತ್ತಲೇ ಬರುತ್ತಿದ್ದಾರೆ. ಹೀಗಾಗಿ 2023ರ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ ಅನ್ನೋ ಕುತೂಹಲವಿದೆ.




Leave a Reply

Your email address will not be published. Required fields are marked *

error: Content is protected !!