ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಹೊಸಕೋಟೆ ತಾಲೂಕು ಆರೋಗ್ಯಾಧಿಕಾರಿ ಮಂಜುನಾಥ ಪತ್ತೆಯಾಗಿದ್ದಾರೆ. ಸಾಕಷ್ಟು ಹುಡುಕಾಟದ ಬಳಿಕ ಮಂಜುನಾಥ ಪತ್ತೆಯಾಗಿದ್ದು, ನೆಲಮಂಗಲ ಠಾಣೆ ಪೊಲೀಸರು ಕರೆದುಕೊಂಡು ಬಂದಿದ್ದಾರಂತೆ.
ಮಂಜುನಾಥ ಕಾರ್ ನೆಲಮಂಗಲ ಟೋಲ್ ಗೇಟ್ ಮಾರ್ಗವಾಗಿ ಹಾದು ಹೋಗಿರುವುದು ಪತ್ತೆಯಾಗಿತ್ತು. ಈ ಸಂಬಂಧ 10 ತಂಡಗಳನ್ನ ಮಾಡಿ ತನಿಖೆ ನಡೆಸಲಾಗಿತ್ತು. ಇದೀಗ ಅವರು ಪತ್ತೆಯಾಗಿದ್ದಾರೆ. ತಾಲೂಕು ಆರೋಗ್ಯಾಧಿಕಾರಿ ನಾಪತ್ತೆ ಪ್ರಕರಣದ ಹಿಂದೆ ನಕಲಿ ವೈದ್ಯರ ಕ್ಲಿನಿಕ್ ಮೇಲೆ ದಾಳಿ ಮಾಡಿರುವುದು, ರಾಜಕೀಯ ಒತ್ತಡ ಹಾಗೂ ಪ್ರಭಾವಿಗಳು ಕಿಡ್ನಾಪ್ ಮಾಡಿರುವ ಶಂಕೆ ವ್ಯಕ್ತವಾಗಿದ್ದು ತನಿಖೆ ನಡೆಯುತ್ತಿದೆ.