ತೌಕ್ತೆ ಚಂಡಮಾರುತ ಅನಾಹುತ: ಪರಿಹಾರ ಘೋಷಿಸಿದ ಸರ್ಕಾರ

261

ಪ್ರಜಾಸ್ತ್ರ ಸುದ್ದಿ

ಮಂಗಳೂರು: ಕರ್ನಾಟಕದಲ್ಲಿಯೂ ತೌಕ್ತೆ ಚಂಡಮಾರುತ ಸಾಕಷ್ಟು ಅನಾಹುತ ಸೃಷ್ಟಿಸಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ಚಂಡಮಾರುತದಿಂದ ಸಾಕಷ್ಟು ಹಾನಿಯಾಗಿದೆ. ಹೀಗಾಗಿ ಕಂದಾಯ ಸಚಿವ ಆರ್.ಅಶೋಕ ಸ್ಥಳಕ್ಕೆ ಭೇಟಿ ನೀಡಿದ್ರು. ಸಂಪೂರ್ಣ ಮನೆ ಬಿದ್ದಿದ್ರೆ 5 ಲಕ್ಷ ರೂಪಾಯಿ, ಸ್ವಲ್ಪ ಹಾನಿಯಾದ್ರೆ 1 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಇನ್ನು ಸಮುದ್ರದಲ್ಲಿ ಟಗ್ ಬೋಟ್ ದುರಂತದಿಂದ ಮೃತಪಟ್ಟ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಹಾಗೂ ಚಂಡಮಾರುತದಿಂದ ತೊಂದರೆ ಅನುಭವಿಸಿದ 182 ಕುಟುಂಬಗಳಿಗೆ ತಲಾ 10 ಸಾವಿರ ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!