ಪ್ರಜಾಸ್ತ್ರ ಸುದ್ದಿ
ಚಿತ್ರದುರ್ಗ: ಚಿತ್ರ ಸಾಹಿತಿ ಬಿ.ಎಲ್ ವೇಣು ಅವರಿಗೆ ಬೆದರಿಕೆ ಪತ್ರವೊಂದು ಬಂದಿದೆ. ವೀರ ಸಾರ್ವಕರ್ ಕುರಿತು ಹಗುರವಾಗಿ ಮಾತನಾಡಿದ್ದೀರಿ. ಕೂಡಲೇ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಬೆದರಿಕೆ ಪತ್ರ ಬರೆಯಲಾಗಿದೆ.
ಅಲ್ಲದೆ ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಸಂಬಂಧ ಬರಗೂರು ರಾಮಚಂದ್ರಪ್ಪ ಸಮಿತಿ ಬೆಂಬಲಿಸಿದ 61ಕ್ಕೂ ಹೆಚ್ಚು ಸಾಹಿತಿಗಳನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಬರೆಯಲಾಗಿದೆ. ನೀವು ಸಾರ್ವಕರ್ ಕುರಿತು ಅಗೌರವಿಂದ ಮಾತನಾಡಿದ್ದೀರಿ. ಇದು ನಿಮಗೆ ಶೋಭೆ ತರುವುದಿಲ್ಲ. ಕೂಡಲೇ ಕ್ಷಮೆಯಾಚಿಸಬೇಕು ಎಂದು ಬೆದರಿಕೆ ಹಾಕಲಾಗಿದೆ.