ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ನಾಡಿನ ಸಾಹಿತಿಗಳಿಗೆ ಪದೆಪದೆ ಬೆದರಿಕೆ ಪತ್ರ ಬರುತ್ತಿವೆ. ಇದರ ಜೊತೆಗೆ ಇದೀಗ ರಾಜಕಾರಣಿಗಳು ಸೇರಿ ಬೆದರಿಕೆ ಪತ್ರ ಬಂದಿದೆ. ಈ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿರುವವರಿಗೆ ದುಷ್ಕರ್ಮಿಗಳು ಜೀವ ಬೆದರಿಕೆ ಹಾಕುತ್ತಿರುವುದು ಆತಂಕ ಮೂಡಿಸಿದೆ.
ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ ಅವರಿಗೆ 3ನೇ ಬಾರಿ ಜೀವ ಬೆದರಿಕೆ ಪತ್ರ ಬಂದಿದೆ. ಜೊತೆಗೆ ಬರಗೂರ ರಾಮಚಂದ್ರಪ್ಪ, ಎಸ್.ಜಿ ಸಿದ್ದರಾಮಯ್ಯ, ದೇವನೂರ ಮಹಾದೇವಯ್ಯ, ಲೀನಾ, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಎಚ್.ಡಿ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಬಿ.ಕೆ ಹರಿಪ್ರಸಾದ್, ಕಪಿಲ್ ಸಿಬಲ್, ಟಿಎಂಸಿ ಸಂಸದೆ ಮೋಹಿತಾ ಸೇರಿದಂತೆ 12 ಮಂದಿಗೆ ಬೆದರಿಕೆ ಪತ್ರ ಬಂದಿದೆ.
ಗಣ್ಯರು ಇರುವ ಫೋಟೋಗಳನ್ನು ಅಂಟಿಸಿ ಸಂತ ಶ್ರದ್ಧಾಂಜಲಿ ಎಂದು ಬರೆಯಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳದೆ ಹೋದರೆ ಮುಂದೆ ಏನಾದರೂ ಅನಾಹುತವಾದರೆ ಯಾರು ಹೊಣೆ ಎಂದು ಜನರು ಪ್ರಶ್ನಿಸುತ್ತಿದ್ದಾರೆ.