ಪ್ರಜಾಸ್ತ್ರ ಸುದ್ದಿ
ಕೊಪ್ಪಳ: ಅಡುಗೆ ಕೆಲಸ ಮಾಡುವ ಮಾಡುವ ಮಹಿಳೆಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಕೊಟ್ಟೂರು ಮಠದ ಸ್ವಾಮೀಜಿ ವಿರುದ್ಧ ದೂರು ದಾಖಲಿಸಲಾಗಿದೆ. ಕಮಲಾಕ್ಷಿ ಎಂಬಾಕಿಗೆ ಬಸವಲಿಂಗಮ್ಮ ಹಾಗೂ ಸ್ವಾಮೀಜಿ ಕೊಲೆ ಬೆದರಿಕೆ ಹಾಕಿದ್ದಾರೆ ಅನ್ನೋ ಆರೋಪ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಕಮಲಾಕ್ಷಿ ಎಂಬುವರು ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಕಲ್ಮಠದ ಕೊಟ್ಟೂರು ಸ್ವಾಮೀಜಿ ಹಾಗೂ ಬಸವಲಿಂಗಮ್ಮ ವಿರುದ್ಧ ಕಲಂ 323, 324, 504, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.