ಪ್ರಜಾಸ್ತ್ರ ಸುದ್ದಿ
ಕಲಬುರಗಿ: ನಮ್ಮೊಂದಿಗೆ ಮೂವರು ಬಿಜೆಪಿ ಸಂಸದರು ಸಂಪರ್ಕದಲ್ಲಿದ್ದಾರೆ. ಇನ್ನು ಹಲವು ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಸಧ್ಯ ಅವರ ಹೆಸರು ಹೇಳುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.
ಗ್ಯಾರೆಂಟಿ ಸಮಾವೇಶದಲ್ಲಿ ಭಾಗವಹಿಸಲು ನಗರಕ್ಕೆ ಬಂದ ಅವರು, ನಮ್ಮ ಗ್ಯಾರೆಂಟಿಗಳನ್ನು ಬಿಜೆಪಿಯವರು ಕಾಪಿ ಮಾಡಿ ಮೋದಿ ಗ್ಯಾರೆಂಟಿ ಎಂದು ಹೇಳುತ್ತಿದ್ದಾರೆ ಎಂದು ಕಾಲೆಳೆದರು. ಮಾರ್ಚ್ ಹಾಗೂ ಏಪ್ರಿಲ್ ನಲ್ಲಿ ನೀರಿನ ಸಮಸ್ಯೆ ಹೆಚ್ಚಾಗಲಿದ್ದು, ಎಲ್ಲ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಹಣ ಇಡಲಾಗಿದೆ ಅಂತಾ ತಿಳಿಸಿದರು.