ಕಲುಷಿತ ನೀರು ಸೇವಿಸಿ ಮೂವರ ಸಾವು, ಪರಿಹಾರ ಘೋಷಣೆ

239

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಲುಷಿತ ನೀರು ಸೇವಿಸಿ ರಾಯಚೂರಿನಲ್ಲಿ ಮೂವರು ಮೃತಪಟ್ಟ ಘಟನೆ ಸಂಬಂಧ, ಮುಖ್ಯಮಂತ್ರಿ ಬೊಮ್ಮಾಯಿ ಪರಿಹಾರ ಘೋಷಿಸಿದ್ದಾರೆ. ಮೃತ ಕುಟುಂಸ್ಥರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ರಾಂಪುರ ಹತ್ತಿರದ ನೀರು ಶುದ್ಧೀಕರಣ ಘಟಕವನ್ನು ಕಳೆದ 16 ವರ್ಷಗಳಿಂದ ಸ್ವಚ್ಛಗೊಳಿಸಿಲ್ಲ ಅನ್ನೋ ಆರೋಪ ಕೇಳಿ ಬಂದಿದೆ. ಈ ಮೂಲಕ ಮೂರು ತಿಂಗಳಿಗೊಮ್ಮೆ ಸ್ವಚ್ಛಗೊಳಿಸಬೇಕು ಅನ್ನೋ ನಿಯಮ ಉಲ್ಲಂಘಿಸಲಾಗಿದೆಯಂತೆ. ಕಲುಷಿತ ನೀರು ಕುಡಿದು ಮೂವರು ಸಾವನ್ನಪ್ಪಿದ್ದು, ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. 20 ಜನರು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ.

ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಸಿಎಂ ತನಿಖೆಗೆ ಆದೇಶಿಸಿದ್ದಾರೆ. ರಿಮ್ಸ್ ಆಸ್ಪತ್ರೆಗೆ ದಾಖಲಾಗಿರುವವರ ಆರೋಗ್ಯದ ಮೇಲೆ ವೈದ್ಯರ ತಂಡ ನಿಗಾ ವಹಿಸಿದೆ.




Leave a Reply

Your email address will not be published. Required fields are marked *

error: Content is protected !!