ಪ್ರಜಾಸ್ತ್ರ ಸುದ್ದಿ
ಜೈಪುರ: ರಾಜಸ್ಥಾನದಿಂದ ರಾಜ್ಯಸಭೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸೇರಿ ಮೂವರು ಅವಿರೋಧ ಆಯ್ಕೆ ಆಗಿದ್ದಾರೆ. ಬಿಜೆಪಿಯ ಚುನ್ನಿಲಾಲ್ ಗರಸಿಯಾ, ಮದನ್ ರಾಥೋಡ್ ಅವಿರೋಧ ಆಯ್ಕೆಯಾಗಿದ್ದಾರೆ.
ಮಂಗಳವಾರ ನಾಮಪತ್ರ ಹಿಂದಕ್ಕೆ ಪಡೆಯುವ ದಿನವಾಗಿತ್ತು. ಅಲ್ಲದೆ ಈ ಮೂವರು ಹೊರತು ಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸಿರಲಿಲ್ಲ. ಹೀಗಾಗಿ ಈ ಮೂವರು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ವಿಧಾನಸಭಾ ಕಾರ್ಯದರ್ಶಿ ಮಹಾವೀರ್ ಪ್ರಸಾದ್ ಶರ್ಮಾ ತಿಳಿಸಿದ್ದಾರೆ.