ಬೆಂಗಳೂರು: ಇಂದು ರಾಜ್ಯದ ಮೊದಲ ಮಹಿಳಾ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್ ರಾಜು ಸೇರಿದಂತೆ ಮೂವರು ನಿವೃತ್ತಿಯಾಗ್ತಿದ್ದು ಅವರಿಗೆ ಇಂದು ಫೇರ್ ವೆಲ್ ಪೆರೇಡ್ ಮೂಲಕ ಬೀಳ್ಕೊಡಲಾಯ್ತು.
ನಗರದ ಕೋರಮಂಗಲದ ಕೆಎಸ್ಆರ್ ಪಿ ಮೈದಾನದಲ್ಲಿ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್ ರಾಜು, ಅಗ್ನಿ ಶಾಮಕ ದಳದ ಡಿಜಿಪಿ ಎಂ.ಎನ್ ರೆಡ್ಡಿ ಹಾಗೂ ರಾಜ್ಯ ಪೊಲೀಸ್ ವಸತಿ ಮೂಲ ಸೌಕರ್ಯ ನಿಗಮದ ಡಿಜಿಪಿ ರಾಘವೇಂದ್ರ ಔರಾದ್ಕರ ಅವರಿಗೆ ಪೊಲೀಸ್ ಸಿಬ್ಬಂದಿ ಗೌರವ ಸಲ್ಲಿಸುವ ಮೂಲಕ ಬೀಳ್ಕೊಟ್ಟಿದ್ದಾರೆ. ಈ ಮೂವರು ಹಿರಿಯ ಅಧಿಕಾರಿಗಳು ಇಂದು ನಿವೃತ್ತಿ ಹೊಂದುತ್ತಿದ್ದಾರೆ.