ಕೊಡಗಿನಲ್ಲಿ ಹುಲಿ ದಾಳಿಗೆ ಮತ್ತೊಬ್ಬ ಬಲಿ

231

ಪ್ರಜಾಸ್ತ್ರ ಸುದ್ದಿ

ಕೊಡಗು: ನಿನ್ನೆಯಷ್ಟೇ ಯುವಕನೊಬ್ಬನನ್ನು ಬಲಿ ಪಡೆದಿದ್ದ ಹುಲಿ ಇಂದು ಮತ್ತೊಬ್ಬನನ್ನು ಬಲಿ ಪಡೆದಿದೆ. ಪೊನ್ನಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ರಾಜು ಎಂಬಾತ ಹುಲಿ ದಾಳಿಗೆ ಬಲಿಯಾಗಿದ್ದಾನೆ.

ಮೈಸೂರು ಜಿಲ್ಲೆ ಕೊಳವಿ ಹಾಡಿ ನಿವಾಸಿ ರಾಜು, ಪೊನ್ನಪೇಟೆಯ ನಾಲ್ಕೇರಿಯಲ್ಲಿರುವ ಪೂಣಚ್ಚ ಎಂಬುವರ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ. ಇನ್ನು ನಿನ್ನೆಯಷ್ಟೇ ಕೊಡಗು-ಕೇರಳ ಗಡಿಭಾಗದ ಚೂರಿಕಾಡು ಹತ್ತಿರ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ 18 ವರ್ಷದ ಚೇತನ್ ಅನ್ನೋ ಯುವಕ ಹುಲಿ ದಾಳಿಗೆ ಬಲಿಯಾಗಿದ್ದ.

ಇಂದು ಮತ್ತೊಬ್ಬ ಕಾರ್ಮಿಕ ಮೃತಪಟ್ಟಿದ್ದಾನೆ. ಇದರಿಂದಾಗಿ ಸುತ್ತಲಿನ ಗ್ರಾಮಸ್ಥರಲ್ಲಿ ಭಯ ಆವರಿಸಿಕೊಂಡಿದೆ. ನರಭಕ್ಷಕ ಹುಲಿಯನ್ನು ಸೆರೆ ಹಿಡಿಯಲು ಗ್ರಾಮಸ್ಥರು ಅರಣ್ಯ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!