ಪ್ರಜಾಸ್ತ್ರ ಸುದ್ದಿ
ತುಮಕೂರು: ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಹುಲಿ ಓಡಾಟ ನಡೆಸಿದೆ ಎಂದು ಹೇಳಲಾಗಿತ್ತು. ಇದೀಗ ನೋಡಿದರೆ ಹುಲಿಯ ಮೃತದೇಹ ಗುಬ್ಬಿ ತಾಲೂಕಿನ ಅಂಕಸಂದ್ರ ಹತ್ತಿರದ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.
ಸಿಮೆಂಟ್ ಪೈಪ್ ನೊಳಗೆ ಹುಲಿ ಮೃತದೇಹ ಪತ್ತೆಯಾಗಿದ್ದು, ಸಾಕಷ್ಟು ಅನುಮಾನ ಮೂಡಿಸಿದೆ. ಭದ್ರಾ ಅಭಿಯಾರಣ್ಯದ ವೈದ್ಯರು ಬಂದು ಮೃತದೇಹ ಪರೀಕ್ಷೆ ನಡೆಸಿದ ನಂತರ ಸಾವಿನ ಕುರಿತು ಮಾಹಿತಿ ಸಿಗಲಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಇದೆ ಮೊದಲ ಬಾರಿಗೆ ಹುಲಿ ಇರುವ ಬಗ್ಗೆ ಹಾಗೂ ಅದರ ಓಡಾಟದ ಕುರಿತು ಮಾಹಿತಿ ಸಿಕ್ಕಿತ್ತು. ಆದರೆ, ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಈಗ ನೋಡಿದರೆ ಮೃತದೇಹ ಪತ್ತೆಯಾಗಿದ್ದು, ಸಾಕಷ್ಟು ಅನುಮಾನ ಮೂಡಿಸಿದೆ.