ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಹುಲಿ ಉಗುರು ಇರುವ ಲಾಕೆಟ್ ಧರಿಸಿರುವ ಪ್ರಕರಣ ಸಂಬಂಧ ನಟ ಜಗ್ಗೇಶ್ ಕೋರ್ಟ್ ಮೊರೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಸಂದರ್ಶನದಲ್ಲಿ ಹೇಳಿದ ಮಾತುಗಳನ್ನು ಆಧರಿಸಿ ಮನೆ ಶೋಧ ಮಾಡಲಾಗಿದೆ. ಇದು ಕಾನೂನು ಬಾಹಿರ ಎಂದು ಹೇಳಬೇಕು ಅಂತಾ ವಕೀಲರು ಅರ್ಜಿ ಸಲ್ಲಿಸಿದ್ದಾರಂತೆ.
ಅರಣ್ಯ ಅಧಿಕಾರಿಗಳು ನೀಡಿರುವ ನೋಟಿಸ್ ರದ್ದುಗೊಳಿಸಬೇಕು. ನೋಟಿಸ್ ಗೆ ಉತ್ತರಿಸುವ ಮೊದಲೇ 14 ಅಧಿಕಾರಿಗಳ ತಂಡ ಮನೆ ಶೋಧ ಮಾಡಿದೆ. ತೇಜೋವಧೆ ಮಾಡಲಾಗುತ್ತಿದೆ. ಅಧಿಕಾರಿಗಳ ಕ್ರಮವನ್ನು ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.