ಪ್ರಜಾಸ್ತ್ರ ಅಪರಾಧ ಸುದ್ದಿ
ವಿಜಯಪುರ: ಹುಲ್ಲಿ ಹಾಗೂ ಜಿಂಕೆಯ ಚರ್ಮ ಮತ್ತು ಉಗುರು ಸಂಗ್ರಹ ಮಾಡಿಟ್ಟುಕೊಂಡಿದ್ದ ವ್ಯಕ್ತಿಯೊಬ್ಬನನ್ನ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಮಹೇಶ ಹಿರೇಮಠ ಬಂಧಿತ ಆರೋಪಿಯಾಗಿದ್ದಾನೆ.
ಹುಲಿಯ ಚರ್ಮ, ಒಂದು ಕೃಷ್ಣ ಮೃಗದ ಚರ್ಮ ಹಾಗೂ ಎರಡು ಹುಲಿಯ ಉಗುರುಗಳನ್ನ ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ ಲಕ್ಷಾಂತರ ರೂಪಾಯಿ ಆಗಿದೆ. ಆರೋಪಿ ಮಹೇಶ ಹಿರೇಮಠ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅನ್ವಯ ಕೇಸ್ ದಾಖಲು ಮಾಡಲಾಗಿದೆ.
ವಿಜಯಪುರ ಇತಿಹಾಸದಲ್ಲೇ ಇದು ಮೊದಲ ಪ್ರಕರಣವಾಗಿದೆ. ವಿಜಯಪುರ ಜಿಲ್ಲಾ ಅರಣ್ಯಾಧಿಕಾರಿ ಅಶೋಕ ಪಾಟೀಲ ನೇತ್ರತ್ವದ ತಂಡದಿಂದ ಕಾರ್ಯಚರಣೆ ನಡೆಸಿ ಆರೋಪಿಯನ್ನ ಬಂಧಿಸಿದೆ.