ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ನಗರದ ಕೆ.ಆರ್ ಸರ್ಕಲ್ ಬಳಿ ಟಿಪ್ಪು ಸುಲ್ತಾನ್ ಬ್ಯಾನರ್ ಹಾಕಲಾಗಿದೆ. ಇದನ್ನು ಪುನೀತ್ ಕೆರೆಹಳ್ಳಿ ಹಾಗೂ ಇತರೆ ಕಿಡಿಗೇಡಿಗಳು ಬ್ಯಾನರ್ ಹರಿದಿದ್ದಾರೆ. ಈ ಬಗ್ಗೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಈ ಘಟನೆ ಮನಸ್ಸಿಗೆ ನೋವು ತಂದಿದೆ. ಕಿಡಿಗೇಡಿಗಳ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲು ಪೊಲೀಸರೊಂದಿಗೆ ಮಾತನಾಡಿದ್ದೇನೆ ಎಂದರು.
ಈ ಕೃತ್ಯ ಯಾರು ಮಾಡಿದ್ದಾರೆ ಅನ್ನೋದು ನಮಗೆ ಗೊತ್ತಿದೆ. ದೇಶದ ಸಂಭ್ರಮದ ಸಂದರ್ಭದಲ್ಲಿ ಶಾಂತಿ ಕಾಪಾಡಬೇಕು. ಆದರೆ, ಕೆಲ ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವುದು ಹೋರಾಟಗಾರರಲ್ಲಿತ್ತು. ಅವರಲ್ಲಿ ಜಾತಿ, ಧರ್ಮ ಇರಲಿಲ್ಲ ಎಂದರು.
ಕಾಂಗ್ರೆಸ್ ವತಿಯಿಂದ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಗಾಂಧೀಜಿ, ಅಂಬೇಡ್ಕರ್, ನೆಹರು, ಇಂದಿರಾ ಗಾಂಧಿ, ಟಪ್ಪು ಸುಲ್ತಾನ್ ಸೇರಿ ಅನೇಕ ಮಹನೀಯರ ಫೋಟೋ ಹಾಕಿದ್ದಾರೆ. ಆದರೆ, ಕಳೆದ ರಾತ್ರಿ ಕಿಡಿಗೇಡಿಗಳು ಟಿಪ್ಪು ಸುಲ್ತಾನ್ ಫೋಟೋ ಹರಿದು ಮತ್ತೆ ಅಶಾಂತಿ ಸೃಷ್ಟಿಸಲು ನೋಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗುತ್ತಿದೆ.