ಸುಪ್ರೀಂ ಕದ ತಟ್ಟಿದ ಮಹುವಾ ಮೊಯಿತ್ರಾ

215

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಉದ್ಯಮಿಯೊಬ್ಬರಿಂದ ಹಣ ಪಡೆದಿದ್ದಾರೆ ಎನ್ನು ಆರೋಪ ಸಂಬಂಧ ಲೋಕಸಭೆಯಿಂದ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಸಂಸದ ಸ್ಥಾನದಿಂದ ಶುಕ್ರವಾರ ಉಚ್ಛಾಟಿಸಲಾಗಿದೆ. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಅಸ್ತಿತ್ವದಲ್ಲಿ ಇಲ್ಲದೆ ಇರುವ ನೀತಿಯನ್ನು ಉಲ್ಲಂಘಿಸಲಾಗಿದೆ ಎಂದು ಹೇಳಿ ಉಚ್ಛಾಟಿಸಲಾಗಿದೆ. ನಾನು ಹಣ ಪಡೆದಿರುವುದಕ್ಕಾಗಲಿ, ಉಡುಗೊರೆ ಪಡೆದಿರುವುದಕ್ಕಾಗಿ ಸಾಕ್ಷಿ ಇಲ್ಲ. ವಿರೋಧ ಪಕ್ಷಗಳು ತಾನು ಹೇಳಿದಂತೆ ಕೇಳುತ್ತಿಲ್ಲವೆಂದು ಸಂಸದೀಯ ಸಮಿತಿಯನ್ನು ಅಸ್ತ್ರವನ್ನಾಗಿ ಕೇಂದ್ರ ಸರ್ಕಾರ ಬಳಸಿಕೊಳ್ಳುತ್ತಿದೆ ಎಂದು ಕಿಡಿ ಕಾರಿದ್ದಾರೆ.

ತಮಗೆ ಮಾತನಾಡಲು ಅವಕಾಶ ಕೊಡಲಿಲ್ಲವೆಂದು ಅನೈತಿಕವಾಗಿ ನಡೆದುಕೊಂಡಿದ್ದಾರೆ ಅನ್ನೋ ಕಾರಣಕ್ಕೆ ಅವರನ್ನು ಲೋಕಸಭೆಯಿಂದ ಉಚ್ಛಾಟಿಸಬೇಕು ಎನ್ನುವ ಗೊತ್ತುವಳಿಯನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಂಡಿಸಿದರು. ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.




Leave a Reply

Your email address will not be published. Required fields are marked *

error: Content is protected !!