ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಮುಂಜಾನೆ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. 16ಕ್ಕೂ ಹೆಚ್ಚು ಇಲಾಖೆಗಳ ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ.
ವಿವಿಧ ಇಲಾಖೆಗಳಿಗೆ ಅನದಾನ ಬಿಡುಗಡೆ ಕುರಿತು ಈ ಸಭೆಯಲ್ಲಿ ಚರ್ಚೆಯಾಗಲಿದೆ. ಜೊತೆಗೆ ಗ್ಯಾರೆಂಟಿ ಯೋಜನೆಗಳ ವಿಚಾರ ಪ್ರಸ್ತಾಪಕ್ಕೆ ಬರಲಿದೆ. ಇದಲ್ಲದೆ ಸಚಿವ ಚಲುವರಾಯಸ್ವಾಮಿ ವಿರುದ್ಧ ಕೇಳಿ ಬಂದಿರುವ ಲಂಚದ ಆರೋಪದ ಬಗ್ಗೆ ಸಹ ಚರ್ಚಿಸಲಾಗುವುದು ಎನ್ನಲಾಗುತ್ತಿದೆ.
ಸಚಿವ ಚಲುವರಾಯಸ್ವಾಮಿ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಹೋರಾಟ ನಡೆಸಿದೆ. ಈ ಹಿಂದೆ ಕಾಂಗ್ರೆಸ್ ಪೇ ಸಿಎಂ ಅಭಿಯಾನ ಮಾಡಿದಂತೆ ಪೇ ಸಿಎಂ ಎಂದು ಕ್ಯೂ ಕೋಡ್ ರೆಡಿ ಮಾಡಿದೆ.