ದೆಹಲಿಯಲ್ಲಿ ಕಾಂಗ್ರೆಸ್ ಸಭೆ: ಹೆಚ್ಚಿದ ಕುತೂಹಲ

112

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇಂದು ಮಂಧ್ಯಾಹ್ನ 3 ಗಂಟೆಯಿಂದ ಸಂಜೆ 5.30ರ ತನಕ ಕಾಂಗ್ರೆಸ್ ಸಭೆ ನಡೆಯಲಿದೆ. ಹೀಗಾಗಿ ರಾಜ್ಯದ ನಾಯಕರು ರಾಷ್ಟ್ರ ರಾಜಧಾನಿಗೆ ಪ್ರಯಾಣ ಬೆಳೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ 19 ಸಚಿವರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಎಐಸಿಸಿ ಪದಾಧಿಕಾರಿಗಳು ಸೇರಿದಂತೆ 37ಕ್ಕೂ ಹೆಚ್ಚು ನಾಯಕರೊಂದಿಗೆ ಚರ್ಚೆ ನಡೆಯಲಿದೆ. ಇದು ರಾಜ್ಯದಲ್ಲಿ ಕೈ ನಾಯಕರ ಅಸಮಾಧಾನ, ಸಚಿವರ ವಿರುದ್ಧ ಸ್ವಪಕ್ಷೀಯ ಶಾಸಕರ ಅಸಮಾಧಾನ ಅಥವ ಲೋಕಸಭಾ ಚುನಾವಣೆ ಸಂಬಂಧ ನಡೆಯುವ ಚರ್ಚೆಯೇ ಎಂದು ಪ್ರಶ್ನೆ ಮೂಡಿದೆ.

ಎಂಎಲ್ ಸಿ ಬಿ.ಕೆ ಹರಿಪ್ರಸಾದ ನೀಡಿದ ಹೇಳಿಕೆ, ಶಾಸಕ ಬಿ.ಆರ್ ಪಾಟೀಲ ಹಾಗೂ ತಂಡದವರು ನಡೆಸಿದ ಸಹಿ ಅಭಿಯಾನ ಸಾಕಷ್ಟು ಚರ್ಚೆ ಹುಟ್ಟು ಹಾಕಿತು. ವಿಪಕ್ಷಗಳಿಗೆ ಇದೊಂದು ಅಸ್ತ್ರವಾಯಿತು. ಹೀಗಾಗಿ ಇಂದಿನ ಸಭೆಯಲ್ಲಿ ಏನೆಲ್ಲ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ ಅನ್ನೋದು ಸಂಜೆಯ ವೇಳೆ ತಿಳಿಯಲಿದೆ.




Leave a Reply

Your email address will not be published. Required fields are marked *

error: Content is protected !!