ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯಕ್ಕೆ ವಾಪಸ್ ಆಗಿದ್ದಾರೆ. ಈ ವೇಳೆ ಅವರು ಮಾಧ್ಯಮದವರ ಜೊತೆ ಮಾತ್ನಾಡಿದ್ದು, ಎರಡು ದಿನಗಳಿಂದ ವರಿಷ್ಠರ ಜೊತೆ ಸಂಪುಟ ರಚನೆ ಬಗ್ಗೆ ಚರ್ಚೆ ಮಾಡಿದ್ದೇನೆ. ಮುಂಜಾನೆ 11ರಿಂದ 11.30ರ ಸುಮಾರಿನಲ್ಲಿ ನೂತನ ಸಚಿವರ ಅಧಿಕೃತ ಪಟ್ಟಿ ಬಿಡುಗಡೆಯಾಗುತ್ತೆ ಎಂದಿದ್ದಾರೆ.
ರಾಜಭವನದ ಮೂಲಕ ಅಧಿಕೃತ ಪಟ್ಟಿ ಹೊರಬೀಳುತ್ತೆ. ಇನ್ನು ಮಧ್ಯಾಹ್ನ 2.15ಕ್ಕೆ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.