ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಇಂದು ಮುಂಜಾನೆ 11.30ಕ್ಕೆ ಮಾಧ್ಯಮಗೋಷ್ಠಿಯನ್ನು ಕರೆದಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಇಂದೇ ಘೋಷಣೆ ಮಾಡುವ ಸಾಧ್ಯತೆಯಿದೆ. ಈ ಮೂಲಕ ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ.
ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥರು ಮಾತನಾಡಲಿದ್ದು, ಬಹುತೇಕ ಕರ್ನಾಟಕ ಚುನಾವಣೆಯ ದಿನಾಂಕ ಪ್ರಕಟವಾಗಲಿದೆ. ಜೊತೆಗೆ ಇತ್ತೀಚೆಗೆ 2 ವರ್ಷ ಜೈಲು ಶಿಕ್ಷೆಗೆ ಒಳಗಾಗಿರುವ ರಾಹುಲ್ ಗಾಂಧಿ ಅವರ ಕೇರಳದ ವೈಯನಾಡ್ ಕ್ಷೇತ್ರ ಸೇರಿ ತೆರವಾಗಿರುವ ಲೋಕಸಭಾ ಕ್ಷೇತ್ರಗಳಿಗೂ ಚುನಾವಣೆ ಘೋಷಿಸುವ ಸಾಧ್ಯತೆಯಿದೆ.