ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಳೆದ ಮಂಗಳವಾರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಹತ್ಯೆಯಾದ ಬಿಜೆಪಿ ಪ್ರವೀಣ್ ನೆಟ್ಟಾರ್ ಕುಟುಂಬಸ್ಥರನ್ನು ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಚಿವರು ಹಾಗೂ ಬಿಜೆಪಿ ನಾಯಕರು ಭೇಟಿಯಾಗಲಿದ್ದಾರೆ.
ಸಿಎಂ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ಮಧ್ಯಾಹ್ನ 3.30ಕ್ಕೆ ವಿಮಾನದಲ್ಲಿ ಮಂಗಳೂರಿಗೆ ಪ್ರಯಾಣ ಬೆಳಸಲಿದ್ದಾರೆ. ಈಗಾಗ್ಲೇ ಬಿಜೆಪಿ, ಹಿಂದೂಪರ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಸಿಎಂ ಭೇಟಿ ವೇಳೆ ಏನಾಗುತ್ತೆ ಅನ್ನೋ ಕುತೂಹಲ ಮೂಡಿದೆ.