ಗೃಹಲಕ್ಷ್ಮಿ ಯೋಜನೆ ಜಾರಿಗೆ ಸಜ್ಜಾದ ಅರಮನೆ ನಗರಿ

248

ಪ್ರಜಾಸ್ತ್ರ ಸುದ್ದಿ

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಮನೆಯ ಒಡತಿಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. ಹೀಗಾಗಿ ಅರಮನೆ ನಗರಿ ಅಲಂಕಾರಗೊಂಡಿದೆ. ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿದೆ.

1.10 ಕೋಟಿ ಮಹಿಳೆಯರು ಈ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಇಂದು ಇವರಿಗೆಲ್ಲ 2 ಸಾವಿರ ತಲುಪಲಿದೆ ಎಂದು ಹೇಳಲಾಗಿದೆ. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರು ಭಾಗವಹಿಸಲಿದ್ದಾರೆ.

200 ಯುನಿಟ್ ಉಚಿತ ವಿದ್ಯುತ್ ಆದ ಗೃಹಜ್ಯೋತಿ ಯೋಜನೆಯಿಂದ 1.41 ಕೋಟಿ ಗ್ರಾಹಕರು ಪ್ರಯೋಜನೆ ಪಡೆಯುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಯೋಜನೆಯಾದ ಶಕ್ತಿ ಅಡಿಯಲ್ಲಿ 46 ಕೋಟಿ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. 1.41 ಕುಟುಂಬಗಳು ಅನ್ನಭಾಗ್ಯ ಯೋಜನೆ ಅಡಿ ಪ್ರಯೋಜನ ಪಡೆದುಕೊಳ್ಳುತ್ತಿವೆ. ಇದೀಗ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಿದೆ. ಇನ್ನು ಯುವ ನಿರುದ್ಯೋಗಿಗಳಿಗೆ 2 ವರ್ಷಗಳ ಕಾಲ ತಿಂಗಳಿಗೆ 3000(ಪದವೀಧರರು) ಹಾಗೂ 1500(ಡಿಪ್ಲೋಮಾ) ರೂಪಾಯಿ ನೀಡುವ ಯುವನಿಧಿ ಮುಂದಿನ ವರ್ಷದಿಂದ ಜಾರಿಗೆ ಬರಲಿದೆ.




Leave a Reply

Your email address will not be published. Required fields are marked *

error: Content is protected !!