ಪ್ರಜಾಸ್ತ್ರ ಸುದ್ದಿ
ಹೊಸಪೇಟೆ: ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಹಂಪಿ ಉತ್ಸವಕ್ಕೆ ಸಂಜೆ 7.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಕಾರ್ಯಕ್ರಮಗಳಿಗಾಗಿ ನಾಲ್ಕು ವೇದಿಕೆಗಳು ಸಜ್ಜಾಗಿವೆ.
ಹಂಪಿ ಉತ್ಸವಕ್ಕಾಗಿ ಸರ್ಕಾರ 14 ಕೋಟಿ ರೂಪಾಯಿ ಅನುದಾನ ನೀಡಿದೆ. ಜಿಲ್ಲೆಯ 137 ಗ್ರಾಮ ಪಂಚಾಯ್ತಿಗಳಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ವಸತಿ ಸಚಿವ ಜಮೀರ್ ಅಹ್ಮದ್, ಶಾಸಕ ಗವಿಯಪ್ಪ, ಅಶ್ವಿನಿ ಪುನೀತ್ ರಾಜಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮೂರು ದಿನಗಳ ನಡೆಯುವ ಕಾರ್ಯಕ್ರಮದಲ್ಲಿ ಕವಿ ಗೋಷ್ಠಿ, ಹಾಡು, ನೃತ್ಯ, ಹಾಸ್ಯದ ಹಬ್ಬ ನಡೆಯಲಿದೆ. ಇದಕ್ಕಾಗಿ ಕನ್ನಡದ ಗಾಯಕರು, ಕಲಾವಿದರು ಹಾಗೂ ಬೇರೆ ಭಾಷೆಗಳ ಗಾಯಕರು ಪ್ರದರ್ಶನ ನೀಡಲಿದ್ದಾರೆ.