ಪ್ರತ್ಯೇಕ ಜಿಲ್ಲೆಗಾಗಿ ಜಮಖಂಡಿ ಬಂದ್

416

ಬಾಗಲಕೋಟೆ: ಬಳ್ಳಾರಿಯ ವಿಜಯನಗರವನ್ನ ಪ್ರತ್ಯೇಕ ಜಿಲ್ಲೆ ಮಾಡಬೇಕು ಅನ್ನೋ ಚರ್ಚೆಯ ಬೆನ್ನಲ್ಲೇ, ಇದೀಗ ಉತ್ತರ ಕರ್ನಾಟಕದ ಜಿಲ್ಲೆಯಲ್ಲಿ ಈ ಕೂಗು ಕೇಳಿ ಬಂದಿದೆ.

ಜಮಖಂಡಿಯನ್ನ ಬಾಗಲಕೋಟೆಯಿಂದ ಪ್ರತ್ಯೇಕಿಸಿ ಹೊಸ ಜಿಲ್ಲೆ ಮಾಡಬೇಕೆಂದು ಇಂದು ಬಂದ್ ಗೆ ಕರೆ ನೀಡಲಾಗಿದೆ. ಜಮಖಂಡಿ ಜಿಲ್ಲಾ ಸಂಕಲ್ಪ ಹೋರಾಟ ಸಮಿತಿಯಿಂದ ಬಂದ್ ಗೆ ಕರೆ ನೀಡಲಾಗಿದೆ. ಹೀಗಾಗಿ ವ್ಯಾಪಾರ ವಹಿವಾಟು, ಬಸ್ ಸಂಚಾರ ಸೇರಿದಂತೆ ಬಹುತೇಕ ಸಾರ್ವಜನಿಕ ವ್ಯವಸ್ಥೆ ಬಂದ್ ಆಗಿದೆ.

ಓಲೆ ಮಠದ ಚನ್ನಬಸವ ಸ್ವಾಮೀಜಿ ಬಂದ್ ನೇತೃತ್ವವನ್ನ ವಹಿಸಿಕೊಂಡಿದ್ದಾರೆ. ಇದರಲ್ಲಿ 25 ಮಠಾಧೀಶರು ಸೇರಿದಂತೆ ಜಮಖಂಡಿ ಜಿಲ್ಲಾ ಸಂಕಲ್ಪ ಹೋರಾಟ ಸಮಿತಿ ಸದಸ್ಯರು ಭಾಗವಹಿಸಲಿದ್ದಾರೆ. ಕಾಂಗ್ರೆಸ್ ಶಾಸಕ ಆನಂದ ನ್ಯಾಮನಗೌಡ ತೇರದಾಳ ಬಿಜೆಪಿ ಶಾಸಕ ಸಿದ್ದು ಸವದಿ ಭಾಗವಹಿಸಲಿದ್ದಾರೆ ಅಂತಾ ಹೇಳಲಾಗ್ತಿದೆ.




Leave a Reply

Your email address will not be published. Required fields are marked *

error: Content is protected !!