ಪ್ರಜಾಸ್ತ್ರ ಸುದ್ದಿ
ಕೋಲಾರ: ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳು ಶುಕ್ರವಾರ ಬಂದ್ ಗೆ ಕರೆ ನೀಡಿವೆ. ಹೀಗಾಗಿ ಖಾಸಗಿ ಶಾಲೆಗಳು ರಜೆ ನೀಡಿವೆ. ಸರ್ಕಾರಿ ಶಾಲೆಗಳಿಗೆ ರಜೆ ನೀಡಿಲ್ಲ.
ರಸ್ತೆ ಸಮಸ್ಯೆ ಸಂಬಂಧ ಜಿಲ್ಲಾಧಿಕಾರಿ ಸೇರಿ ಜನಪ್ರತಿನಿಧಿಗಳ ಗಮನಕ್ಕೆ ತಂದರೆ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಇಂದು ಬಂದ್ ಗೆ ಕರೆ ನೀಡಲಾಗಿದೆ. ವಿವಿಧ ಸಂಘಟನೆಗಳ ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಲಿದ್ದಾರೆ. ಕೆಎಸ್ಆರ್ ಟಿಸಿ ಬಸ್ ಡಿಪೋ ಮುಂದೆ ಪ್ರತಿಭಟನೆ ನಡೆಸಿ ಬಸ್ ಬಿಡದಂತೆ ಧರಣಿ ನಡೆಸಲಾಗುವುದು, ಅಂಗಡಿ, ಮುಂಗಟ್ಟುಗಳು, ಆಟೋಗಳು ಬಂದ್ ಮಾಡುವಂತೆ ಕರೆ ಕೊಡಲಾಗಿದೆ ಅಂತಾ ತಿಳಿಸಲಾಗಿದೆ. ಇದಕ್ಕೆ ಜನರ ಪ್ರತಿಕ್ರಿಯೆ ಹೇಗಿರುತ್ತೆ ಅನ್ನೋದು ಕೆಲ ಗಂಟೆಗಳಲ್ಲಿ ತಿಳಿಯಲಿದೆ.