ಪ್ರಜಾಸ್ತ್ರ ಸುದ್ದಿ
ಮಂಗಳೂರು: ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ವಿವಿಧ ಆಸ್ಪತ್ರೆಗೆ ಹಾಗೂ ಉದ್ಯಮಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಉದ್ಯಮಿ ಎ.ಜೆ ಶೆಟ್ಟಿ ಮನೆ, ಆಸ್ಪತ್ರೆ ಮೇಲೆ ದಾಳಿ ನಡೆಸಲಾಗಿದೆ.
ಇನ್ನು ಯೆನೆಪೋಯಾ ಆಸ್ಪತ್ರೆಯ ಮಾಲೀಕರಾಗಿರುವ ಬೈಂದೂರ ಮನೆ ಮೇಲೆ ಸಹ ದಾಳಿ ನಡೆಸಲಾಗಿದೆ. ಈ ಇಬ್ಬರು ಉದ್ಯಮಿಗಳಿಗೆ ಸೇರಿದ ಕಚೇರಿ, ಮನೆ, ಆಸ್ಪತ್ರೆ ಸೇರಿ ವಿವಿಧ ಕಡೆ ದಾಳಿ ನಡೆಸಿದ್ದಾರೆ.